ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೈಂಗಿಕ ಕಿರುಕುಳ ಆರೋಪದ ಮೇಲೆ ಬಂಧಿತರಾಗಿರುವ ವಕೀಲ ದೇವರಾಜೇಗೌಡ ಬಂಧನದಲ್ಲಿರುವಾಗಲೇ ಅವರ ಜೀವಕ್ಕೆ ಅಪಾಯವಿದೆ ಎಂದು ಮಾಜಿ ಶಾಸಕ ಸುರೇಶಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ದೇವರಾಜೇಗೌಡರನ್ನು ಹಲವು ತಿಂಗಳುಗಳ ಕಾಲ ಕಸ್ಟಡಿಯಲ್ಲಿಡುವ ಯೋಜನೆ ಇತ್ತು. ಈ ಸಂದರ್ಭದಲ್ಲಿ, ಜೀವಕ್ಕೆ ದೊಡ್ಡ ಅಪಾಯವಿದೆ. ಇದು 100% ನಿಜ. ಪ್ರಕರಣದ ಖಳನಾಯಕರು, ಸಚಿವರು ಭಯೋತ್ಪಾದಕರಂತೆ ವರ್ತಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.