ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ ತಂಡ ರಚನೆ

ಹೊಸದಿಗಂತ ವರದಿ,ಕಲಬುರಗಿ.

ಬಯಲು ಬಹಿರ್ದೆಸೆಗೆ ತೆರಳಿದ 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಅಮಾನವಿಯ ಕೃತ್ಯ ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಫಜಲಪುರ ತಾಲೂಕಿನ ಬಾಲಕಿ ಶಾಲೆಗೆಂದು ಆಳಂದ ತಾಲೂಕಿನ ಗ್ರಾಮದಲ್ಲಿರುವ ಅತ್ತೆ ಮನೆಯಲ್ಲಿದ್ದಳು. ಮಂಗಳವಾರ 3 ಗಂಟೆ ಸಮಯದಲ್ಲಿ ಬಹಿರ್ದೆಸೆಗೆ ಎಂದು ಹೊರ ಹೋಗಿದ್ದ ಬಾಲಕಿ ಸುಮಾರು ಹೊತ್ತು ಕಳೆದರು ಬಂದಿರಲಿಲ್ಲ, ಗಾಬರಿಯೊಂಡ ಬಾಲಕಿ ಕುಟುಂಬಸ್ಥರು, ಗ್ರಾಮಸ್ಥರು ಹುಡುಕಾಟ ನಡೆಸಿದಾಗ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮೈಮೇಲೆ ಎಳೆದಾಡಿ ತರಚಿದ ಗಾಯಗಳಾಗಿದ್ದು, ವೇಲ್ ದಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಲಾಗಿದೆ.
ಮೇಲ್ನೋಟಕ್ಕೆ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ವೆಸಗಿ ನಂತರ ಕೊಲೆಗೈಯಲಾಗಿದೆ ಎಂದು ಪೊಲೀಸ್ ಪ್ರಾಥಮಿಕ ತನಿಖೆಯಿಂದ ಬಯಲಾಗಿದೆ.

9ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ದೀಪಾವಳಿ ರಜೆಗೆ ತನ್ನ ಸ್ವಗ್ರಾಮಕ್ಕೆ ತೆರಳಿ, ನ.03 ರಿಂದ ಪರೀಕ್ಷೆ ಇರುವ ಕಾರಣ ನಿನ್ನೆಯಷ್ಟೆ ಮರಳಿ ಬಂದಿದ್ದಳು. ಹೀಗೆ ಬಂದವಳು ಬಯಲು ಬಹಿರ್ದೆಸೆಗೆ ಹೋದಾಗ ದುಷ್ಕರ್ಮಿಗಳು ಅಮಾನವೀಯ ಕೃತ್ಯ ನಡೆಸಿದ್ದಾರೆ. ಸ್ಥಳಕ್ಕೆ ಕಲಬುರಗಿ ಎಸ್ಪಿ ಇಶಾ ಪಂತ್ ಸೇರಿ ಅಧಿಕಾರಿಗಳ ಭೇಟಿನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾಮುಕರ ಬಂಧನಕ್ಕೆ ಬಲೆ ಬಿಸಿದ್ದಾರೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!