ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯಲ್ಲಿ ರಾಮ ಮಂದಿರ ಟ್ರಸ್ಟ್ಗೆ ಸಂಬಂಧಿಸಿದಂತೆ ಸುಮಾರು 5,000 ಕೋಟಿ ರೂ. ದುರುಪಯೋಗವಾಗಿದೆ ಎಂಬ ವರದಿಗಳಿವೆ. ಅರ್ಚಕರು ಹಣವನ್ನು ದೋಚುತ್ತಿದ್ದಾರೆ. ರಾಮನ ಹೆಸರನ್ನು ಜಪಿಸಿ ಬೇರೆಯವರ ಆಸ್ತಿಯನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ರಾಮನ ಹೆಸರಿನಲ್ಲಿ ಲೂಟಿ ನಡೆದಿದೆ. ಕೋಟ್ಯಂತರ ರೂಪಾಯಿಗಳನ್ನು ಲೂಟಿ ಮಾಡಲು ದೇವಾಲಯವನ್ನು ನಿರ್ಮಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ದೇವಾಲಯಗಳನ್ನು ಸಾಮಾನ್ಯವಾಗಿ ಸ್ವಾಮೀಜಿಗಳು ಮತ್ತು ಮಠಾಧೀಶರು ಉದ್ಘಾಟಿಸುತ್ತಾರೆ, ಆದರೆ ರಾಮ ಮಂದಿರವನ್ನು ಪ್ರಧಾನಿಯೇ ಉದ್ಘಾಟಿಸಿದ್ದಾರೆ. ದೇವಾಲಯದ ಹುಂಡಿಯಿಂದ ಬರುವ ಹಣ ಎಲ್ಲೋ ಹೋಗುತ್ತಿದೆ. ಅವರ ಸ್ವಂತ ಜನರು ಇದರ ಹಿಂದೆ ಇದ್ದಾರೆಯೇ ಅಥವಾ ಬೇರೆ ಯಾರಾದರೂ ಇದ್ದಾರೆಯೇ ಎಂಬುದನ್ನು ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.



