ಹೊಸದಿಗಂತ ವರದಿ ವಿಜಯಪುರ:
ವಿಜಯಪುರದಲ್ಲಿ ಹಾಡುಹಗಲೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ನಗರದ ವಾರ್ಡ್ ನಂ.19ರ ಪಾಲಿಕೆ ಸದಸ್ಯೆ ಪತಿ ಹಾಗೂ ರೌಡಿಶೀಟರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರೌಡಿಶೀಟರ್ ಸ್ಥಳದಲ್ಲೇ ಸಾವಿಗೀಡಾದ ಘಟನೆ ಇಲ್ಲಿನ ಚಾಂದಪುರ ಕಾಲೋನಿಯಲ್ಲಿ ಶನಿವಾರ ನಡೆದಿದೆ.
ಹೈದರ್ ಅಲಿ ನದಾಫ್ ಹತ್ಯೆಯಾದ ರೌಡಿಶೀಟರ್. ನದಾಫ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ನದಾಫ್ ಅವರನ್ನು ಹತ್ಯೆಗೈದು ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.