ಮೈಸೂರಿನಲ್ಲಿ ಚರ್ಚ್‌ ಮೇಲೆ ದುಷ್ಕರ್ಮಿಗಳ ದಾಳಿ: ಏಸುವಿನ ಮೂರ್ತಿ ಧ್ವಂಸ

ಹೊಸದಿಗಂತ ಡಿಜಿಟಲ್ ಡೆಸ್ಕ್‌ :

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಸೆಂಟ್‌ ಮೇರಿಸ್ ಚರ್ಚ್‌ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.
ಚರ್ಚ್ ಒಳಗೆ ನುಗ್ಗಿ ಬಾಲ ಏಸುವಿನ ಮೂರ್ತಿ ಹಾಗೂ ತೊಟ್ಟಿಲನ್ನು ಒಡೆದು ಹಾಕಿದ್ದಾರೆ.
ಚರ್ಚ್​ನಲ್ಲಿ ಯಾರು ಇಲ್ಲದ ವೇಳೆ ದುಷ್ಕರ್ಮಿಗಳಿಂದ ದಾಳಿ ಮಾಡಿ, ಬಾಲ ಏಸುವಿನ‌ ಮೂರ್ತಿಯನ್ನ ಪುಡಿ ಮಾಡಿದ್ದಾರೆ. ಹಾಗೇ ಚರ್ಚ್ ಹೊರಗೆ ಇದ್ದ ಹುಂಡಿ ಕೂಡ ಕಳ್ಳತನವಾಗಿದೆ. ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!