ನಡುರಾತ್ರಿ ಕಾರಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು: ಸಾಫ್ಟ್‌ವೇರ್‌ ಉದ್ಯೋಗಿ ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತಡರಾತ್ರಿ ದುಷ್ಕರ್ಮಿಗಳು ಕಾರಿಗೆ ಪೆಟ್ರೋಲ್ ಸುರಿದು ಕಾರಿನಲ್ಲಿದ್ದ ಸಾಫ್ಟ್‌ವೇರ್ ಉದ್ಯೋಗಿ ನಾಗರಾಜು ಅವರನ್ನು ಸುಟ್ಟು ಹಾಕಿರುವ ಘಟನೆ ತಿರುಪತಿ ಚಂದ್ರಗಿರಿ ಮಂಡಲದ ಗಂಗೂಡುಪಳ್ಳೆಯಲ್ಲಿ ದುಷ್ಕೃತ್ಯ ನಡೆದಿದೆ. ತಿರುಪತಿಯಿಂದ ಸ್ವಗ್ರಾಮ ಬ್ರಾಹ್ಮಣಪಲ್ಲಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಕಾರಿಗೆ ಬೆಂಕಿ ಹಚ್ಚಿದ ಬಳಿಕ ಪೊಲೀಸರು ಬೆಂಕಿಯಲ್ಲಿ ನಾಗರಾಜು ಸಜೀವ ದಹನವಾಗಿರುವುದನ್ನು ಪತ್ತೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಕಾರಿನ ನಂಬರ್ ಪ್ಲೇಟ್ ಆಧರಿಸಿ ಮೃತರನ್ನು ಗುರುತಿಸಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಚಿನ್ನದ ಸರ ಹಾಗೂ ಚಪ್ಪಲಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಡಲೇ ನಾಗರಾಜು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ನಾಗರಾಜು ನಿಧನದಿಂದ ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ. ಮೃತ ನಾಗರಾಜ್‌ಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಕೊಲೆಯ ಹಿಂದಿನ ಉದ್ದೇಶದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಐ ಓಬುಲೇಶು ಮಾರ್ಗದರ್ಶನದಲ್ಲಿ ತನಿಖೆ ಚುರುಕುಗೊಂಡಿದೆ. ಆರೋಪಿಗಳನ್ನು ಶೀಘ್ರವೇ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!