ತೆಂಗು, ಬಾಳೆ, ಅಡಿಕೆ ತೋಟಕ್ಕೆ ಕಿಡಿಗೇಡಿಗಳಿಂದ ಬೆಂಕಿ: ಬೆಲೆ ಬಾಳುವ ವಸ್ತುಗಳು ನಾಶ

ಹೊಸದಿಗಂತ, ನಾಗಮಂಗಲ:

ತೆಂಗು, ಬಾಳೆ ಮತ್ತು ಅಡಿಕೆ ಮರಗಳಿಂದ ಕೂಡಿದ್ದ ತೋಟಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಪರಿಣಾಮ  ಗಿಡ ಮರಗಳು, ಹನಿ ನೀರಾವರಿ ಪೈಪ್‌ಗಳು ಸುಟ್ಟು ಭಸ್ಮವಾಗಿ ಲಕ್ಷಾಂತರ ಮೌಲ್ಯದ ಹಾನಿಯಾಗಿರುವ ಘಟನೆ ತಾಲೂಕಿನ ಸಾತೇನಹಳ್ಳಿ ಗ್ರಾಮದ ಪ್ರಗತಿಪರ ರೈತ ಕುಮಾರಸ್ವಾಮಿ ಅವರ ಜಮೀನಿನಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.

ಗ್ರಾಮದ ಹೊರವಲಯದ 1ಕಿ.ಮೀ. ದೂರದಲ್ಲಿರುವ ರೈತ ಕುಮಾರಸ್ವಾಮಿ ಅವರ ತೋಟಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಕೆಲವೇ ಹೊತ್ತಿನಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ತೋಟವನ್ನು ಆವರಿಸಿಕೊಂಡು ಗಿಡ, ಮರ ಹಾಗೂ ಹನಿ ನೀರಾವರಿ ಪೈಪ್‌ಗಳು ಸುಟ್ಟು ಹೋಗಿವೆ. ಸಂಜೆ ವೇಳೆಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕುಮಾರಸ್ವಾಮಿ ಸ್ಥಳಕ್ಕೆ ಹೋಗಿ ನೋಡುವಷ್ಟರಲ್ಲಿ ಎಲ್ಲವೂ ನಾಶವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!