ಹೊಸದಿಗಂತ ವರದಿ, ಯಾದಗಿರಿ:
ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ನಡೆದಿದೆ.
ನಗರದ ಕನಕ ಸರ್ಕಲ್ ನಲ್ಲಿರುವ ಕಚೇರಿಗೆ ಬೆಂಕಿ ಹಚ್ಚಲಾಗಿದ್ದು, ಅಲ್ಲಿರುವ ಪೆಟ್ರೋಲ್ ಕ್ಯಾನ್ ಬಿಟ್ಟು ಹೋಗಿದ್ದಾರೆ.
ಕಚೇರಿಯಲ್ಲಿದ್ದ ಸೋಪಾ, ಎಸಿ ಎಲ್ಲವೂ ಬೆಂಕಿಗೆ ಅಹುತಿಯಾಗಿ ಸುಟ್ಟು ಭಸ್ಮವಾಗಿವೆ. ಕಾಂಗ್ರೆಸ್ ಕಚೇರಿಗೆ ಬೆಂಕಿ ತಗುಲಿರುವ ಘಟನೆ ತಿಳಿಸಿ ನಗರ ಪೊಲೀಸ್ ಅಧಿಕಾರಿಗಳು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.
ಡಾಗ್ ಸ್ಕ್ವಾಡ್, ಬೆರಳಚ್ಚು ತಜ್ಞ ಸೇರಿ ಪೊಲೀಸರಿಂದ ಪರಿಶೀಲನೆ ನಡೆಯುತ್ತಿದ್ದೂ, ಕಾಂಗ್ರೆಸ್ ಕಚೇರಿಗೆ ಬೆಂಕಿ ಹಚ್ಚಿ ಪೆಟ್ರೋಲ್ ಕ್ಯಾನ್ ಅಲ್ಲೇ ಬಿಸಾಕಿ ಹೋದ ಕಿಡಿಗೇಡಿಗಳ ಪತ್ತೆಗೆ ಪೋಲಿಸರು ಗಾಳ ಹಾಕಿದ್ದಾರೆ.
ನಗರ ಪೊಲೀಸ್ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದೆ.