ವೈದ್ಯನ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು

ಹೊಸದಿಗಂತ ವರದಿ, ರಾಯಚೂರು:

ಇಲ್ಲಿನ ಖಾಸಗಿ ಆಸ್ಪತ್ರೆಯ ವೈದ್ಯ ಡಾ.ಜಯಪ್ರಕಾಶ ಪಾಟೀಲ್ ಬೆಟ್ಟದೂರು ಮೇಲೆ ದುಷ್ಕರ್ಮಿಗಳು ಗುಂಡಿನ‌ ದಾಳಿ ನಡಸಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗುರುವಾರ ಮಧ್ಯಾಹ್ನ 2.30ಕ್ಕೆ ರಾಯಚೂರಿನಿಂದ ಮಾನವಿಗೆ ಹೋಗುವಾಗ ಸಾತ್ ಮೈಲ್ ಕ್ರಾಸ್ ಹತ್ತಿರ‌ ಇಬ್ಬರು ಅಪರಿಚಿತರು ದ್ವಿಚಕ್ರ ವಾಹನದಲ್ಲಿ ಬಂದು ಗುಂಡಿನ‌ ದಾಳಿ ಮಾಡಿದ್ದಾರೆ. ಆದರೆ, ಗುರಿ ತಪ್ಪಿದ್ದು, ಕಾರಿನ ಬಾನಟ್ ಗೆ ಗುಂಡು ತಗುಲಿದೆ. ವೈದ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರು ದುಷ್ಕರ್ಮಿಗಳ ಬಂಧನಕ್ಕೆ ಜಾಲ ಬೀಸಿದ್ದು, ತನಿಖೆ ಶುರು‌ ಮಾಡಿದ್ದಾರೆ. ಕೆಲ ದಿನಗಳಿಂದ ದುಷ್ಕರ್ಮಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗುತ್ತದೆ. ‌

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!