ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ಬಸವಣ್ಣನ ಬಗ್ಗೆ ತಪ್ಪು ಮಾಹಿತಿ, ಆಕ್ರೋಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಳೆದ ಕೆಲವು ದಿನಗಳಿಂದ ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ಬಸವಣ್ಣನ ಬಗ್ಗೆ ಇರುವ ಮಾಹಿತಿ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

9ನೇ ತರಗತಿ ಪರಿಷ್ಕೃತ ಸಮಾಜವಿಜ್ಞಾನ ಪಠ್ಯದಲ್ಲಿ ಬಸವಣ್ಣ ಅವರ ಇತಿಹಾಸ ತಿರುಚಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ವೀರಶೈವ ಸಮುದಾಯದವರು ಪರಿಷ್ಕೃತ ಪಠ್ಯಪುಸ್ತಕ ಕುರಿತು ಆಕ್ರೋಶ ಹೊರಹಾಕುತ್ತಿದ್ದರೆ, ಲಿಂಗಾಯತ ಸಮುದಾಯದವರು ವಿಷಯಗಳು ಸರಿಯಾಗಿವೆ ಎಂದು ಹೇಳುತ್ತಿದ್ದಾರೆ.

ಪರಿಷ್ಕೃತ ಪಠ್ಯಪುಸ್ತಕಕ್ಕೆ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥಾನದ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ವೀರಶೈವ ಪದ ತೆಗೆದುಹಾಕಿರುವುದು ಸರಿಯಲ್ಲ, ಸಂಶೋಧಕ ಎಂ.ಎಂ. ಕಲಬುರಗಿ ಅವರು ಪ್ರಧಾನವಾಗಿ ಪ್ರಕಟಿಸಿರುವ ಸಮಗ್ರ ವಚನ ಸಂಪುಟದಲ್ಲಿನ ವಚನಗಳನ್ನು ಅವಲೋಕಿಸಿದರೆ ಬಸವಣ್ಣ ಸೇರಿದಂತೆ 30ಕ್ಕೂ ಹೆಚ್ಚು ಶಿವಶರಣರು ತಮ್ಮ 142 ವಚನಗಳಲ್ಲಿ 221 ಬಾರಿ ವೀರಶೈವ ಪದ ಬಳಕೆ ಮಾಡಿದ್ದಾರೆ. 10 ವಚನಗಳಲ್ಲಿ 21 ಕಡೆ ಮಾತ್ರ ಲಿಂಗಾಯತ ಪದ ಬಳಕೆ ಮಾಡಿದ್ದಾರೆ. ಆದರೆ, ಬಸವಣ್ಣ ಒಂದು ವಚನದಲ್ಲೂ ಲಿಂಗಾಯತ ಪದ ಬಳಕೆ ಮಾಡಿಲ್ಲ. ಒಂದು ವಚನದಲ್ಲಿ ತಾವು ನಿಜ ವೀರಶೈವ ಎಂದು ಉಲ್ಲೇಖಿಸಿದ್ದಾರೆ ಎಂದು ಹೇಳಿದ್ದಾರೆ.

ಅಲ್ಲದೇ ಬಸವಣ್ಣ ಅರಿವನ್ನೇ ಗುರು ವಾಗಿಸಿಕೊಂಡಿದ್ದರು. ಇದು ಸಂಪೂರ್ಣ ತಪ್ಪು ಮಾಹಿತಿ. ಅವರು ಪ್ರತಿಯೊಬ್ಬರ ಅಂತರಂಗದಲ್ಲಿರುವ ಪರಮಾತ್ಮನ ಅರಿವೇ ಗುರುವಾಗಿರಬೇಕು. ಹೀಗಾಗಿ, ಇಂತಹ ಎಲ್ಲ ತಪ್ಪುಗಳನ್ನು ಸರಿಪಡಿಸಬೇಕು ಎಂದು ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!