ಅಪ್ಪಟ ದೇಶೀಯ ಉಡುಗೆಯಲ್ಲಿ ಕಟೀಲು ದೇಗುಲಕ್ಕೆ ಭೇಟಿ ನೀಡಿದ ಮಿಸ್ ಇಂಡಿಯಾ ಸಿನಿ ಶೆಟ್ಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರಾವಳಿಯ ಕುವರಿ ಮಿಸ್ ಇಂಡಿಯಾ ಸಿನಿ ಶೆಟ್ಟಿ ನಾಡಿನ ಪ್ರಸಿದ್ಧ ಪುಣ್ಯ ಕ್ಷೇತ್ರವಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದರು.
ಅಪ್ಪಟ ಭಾರತೀಯ ಉಡುಗೆಯಲ್ಲಿ ಆಗಮಿಸಿದ ಅವರನ್ನು ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಶ್ರೀ ದೇವರ ಶೇಷ ವಸ್ತ್ರ ನೀಡಿ ಗೌರವಿಸಿದರು. ದೇವಳದ ಆಡಳಿತ ಮಂಡಳಿ ಅಧ್ಯಕ್ಷ  ಸನತ್ ಕುಮಾರ್ ಶೆಟ್ಟಿ, ಬಿಪಿನ್ ಚಂದ್ರ ಶೆಟ್ಟಿ ಕೊಡೆತ್ತೂರು ಗುತ್ತು, ಜಯರಾಮ ಮುಕಾಲ್ದಿ. ಮೂಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ  ಸಂತೋಷ್ ಶೆಟ್ಟಿ, ಅಧ್ಯಕ್ಷ   ಪುರುಷೋತ್ತಮ ಶೆಟ್ಟಿ, ಶ್ರೀಧರ ಅಳ್ವ ಗಣೇಶ್ ಶೆಟ್ಟಿ, ವಿಜಯ ಶೆಟ್ಟಿ,  ಸಾಯಿನಾಥ ಶೆಟ್ಟಿ, ಅಭಿಲಾಷ್ ಶೆಟ್ಟಿ, ವರುಣ್ ಕಟೀಲು, ಚಂದ್ರಕಲಾ ಶೆಟ್ಟಿ, ಅಮೂಲ್ಯ ಯು ಶೆಟ್ಟಿ, ಶಾಲಿನಿ ಶೆಟ್ಟಿ, ಮತ್ತಿತರರು ಸ್ವಾಗತಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!