ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಕೊನೆಗೂ ಜೆಡಿಎಸ್ ಕಾರ್ಯಕರ್ತ ಸ್ವರೂಪ್ ಪ್ರಶಾಂತ್ ಗೆ ನೀಡಲಾಗಿದೆ. ಇದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿರ್ಧಾರ ಎಂಬುದಾಗಿ ಸುದ್ದಿಗೋಷ್ಠಿಯಲ್ಲೇ ಕುಮಾರಸ್ವಾಮಿ, ರೇವಣ್ಣ ಹೇಳಿದ್ದರು.
ಇತ್ತ ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಕೈತಪ್ಪಿದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಭವಾನಿ ರೇವಣ್ಣ, ದೇವೇಗೌಡರು ಹೇಳಿದಂತೆ ಕೇಳುತ್ತೇನೆ. ನನಗೆ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರಿಲ್ಲ ಎಂದರು.
ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ರೇ ಹಾಸನ ಕ್ಷೇತ್ರದಲ್ಲಿ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಪರವಾಗಿಯೂ ಪ್ರಚಾರ ಮಾಡುತ್ತೇನೆ. ನನಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಯಾವುದೇ ಬೇಸರವೂ ಇಲ್ಲ. ನೋವು ಇಲ್ಲ. ನಮಗೆ ಹೆಡ್ ಡಿ ದೇವೇಗೌಡರ ಆರೋಪ್ಯ ಮುಖ್ಯ ಎಂದರು.