ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಿಟ್ಲಪಡ್ನೂರು ಗ್ರಾಮದ ವಿವಾಹಿತ ಮಹಿಳೆಯೊಬ್ಬಳು ನಾಪತ್ತೆಯಾದ ಬಗ್ಗೆ ಐದು ದಿನಗಳ ಹಿಂದೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಟ್ವಾಳ ನೊಂದಾವಣಿ ಕಚೇರಿಯಲ್ಲಿ ವಿವಾಹಕ್ಕೆ ಸಿದ್ಧತೆ ನಡೆಸುವ ಮೂಲಕ ಲವ್ ಜಿಹಾದ್ ಎಂಬ ಅನುಮಾನಗಳು ವ್ಯಕ್ತವಾಗಿದೆ.
ಪರ್ತಿಪ್ಪಾಡಿ ಗ್ರಾಮ ಚಾವಡಿ ನಿವಾಸಿ ಇಬ್ಬರು ಮಕ್ಕಳ ತಾಯಿ, ಸಜಿಪ ಮೂಲದ ನಾಲ್ಕು ಮಕ್ಕಳ ತಂದೆಯ ಜತೆಗೆ ಪಲಾಯನ ಮಾಡಿದ್ದಾರೆಂದು ಹೇಳಲಾಗುತ್ತಿದೆ. ಮಹಿಳೆಯ ಪತಿ ನಿಧನವಾಗಿದ್ದು, ಮಕ್ಕಳ ಜತೆಗೆ ಗ್ರಾಮ ಚಾವಡಿಯಲ್ಲಿ ವಾಸವಾಗಿದ್ದರು. ನಾಪತ್ತೆಯಾಗುತ್ತಿದ್ದಂತೆ ಪುತ್ರ ಠಾಣೆಗೆ ದೂರು ನೀಡಿದ್ದರು. ವಶೀಕರಣ ಮಾಡಿ ವಿಧವೆ ಮಹಿಳೆಯನ್ನು ಬಲೆಗೆ ಬೀಳಿಸಲಾಗಿದೆ ಎಂಬ ಮಾತು ಕೇಳಿ ಬರುತ್ತಿದೆ.