ಮಡಿಕೇರಿ ನಗರದ ವಿವಿಧ ವಾರ್ಡ್‌ಗಳಿಗೆ ಶಾಸಕ ಅಪ್ಪಚ್ಚು ರಂಜನ್ ಭೇಟಿ, ಅಹವಾಲು ಆಲಿಕೆ

ಹೊಸದಿಗಂತ ವರದಿ, ಮಡಿಕೇರಿ:
ನಗರದ ದೇಚೂರು ಬಡಾವಣೆ, ಮಂಗಳಾದೇವಿ ನಗರ, ಚೈನ್ ಗೇಟ್ ಬಡಾವಣೆ, ಪಿಡಬ್ಲ್ಯೂಡಿ ಕ್ವಾಟ್ರಸ್‍ ಸೇರಿದಂತೆ‌ ವಿವಿಧ ವಾರ್ಡ್‌ಗಳಿಗೆ ಶಾಸಕರ‌ ಎಂ.ಪಿ.ಅಪ್ಪಚ್ಚು ರಂಜನ್ ಅವರು ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು.
ಬಳಿಕ ಮಾತನಾಡಿದ ಶಾಸಕರು, ಕೊಡಗು ಜಿಲ್ಲೆಯಲ್ಲಿ ಅಕ್ಟೋಬರ್’ವರೆಗೂ ಮಳೆ ಇದ್ದುದರಿಂದ ರಸ್ತೆ ಕಾಮಗಾರಿಯನ್ನು ಕೈಗೊಳ್ಳಲು ಸಾಧ್ಯವಾಗಿರಲಿಲ್ಲ, ಇನ್ನು 15 ದಿನದಲ್ಲಿ ರಸ್ತೆ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.
ನಗರೋತ್ಥಾನ ಯೋಜನೆಯಡಿ 40 ಕೋಟಿ ರೂ., 15 ನೇ ಹಣಕಾಸು ಯೋಜನೆಯ 5 ಕೋಟಿ ರೂ. ಎನ್‍ಡಿಆರ್‍ಎಫ್ 3 ಕೋಟಿ ರೂ. ಹಾಗೆಯೇ ವಿಶೇಷ ಅನುದಾನದಡಿ 75 ಲಕ್ಷ ರೂ. ಅನುದಾನ ಲಭ್ಯವಿದ್ದು, ಕ್ರಿಯಾ ಯೋಜನೆ ತಯಾರಿಸಿ ಟೆಂಡರ್ ಹಂತದಲ್ಲಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಉತ್ತಮ ರಸ್ತೆ ನಿರ್ಮಾಣ ಮಾಡಲಾಗುವುದು. ಜಿಲ್ಲೆಯಾದ್ಯಂತ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರು ಹೇಳಿದರು.
ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಪೌರಾಯುಕ್ತ ವಿಜಯ, ನಗರಸಭಾ ಸದಸ್ಯರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!