ಶಾಸಕ ಬಸನಗೌಡ ಪಾಟೀಲ ಯತ್ನಾಳ ಬ್ಯಾನರ್‌ ಹರಿದ ಕಿಡಿಗೇಡಿಗಳು!

ಹೊಸ ದಿಗಂತ ವರದಿ, ವಿಜಯಪುರ:

ಗಣೇಶ ಹಬ್ಬದ ನಿಮಿತ್ತ ನಗರದ ಶಿವಾಜಿ ವೃತ್ತದಲ್ಲಿ ಅಳವಡಿಸಿದ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬ್ಯಾನರ್‌ನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ನಡೆದಿದೆ.

ಶಾಸಕ ಯತ್ನಾಳರ ಬೃಹತ್ ಬ್ಯಾನರ್‌ನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಹೀಗಾಗಿ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಯತ್ನಾಳ ಬ್ಯಾನರ್ ತೆರವು ಮಾಡಲಾಗಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಗಾಂಧಿ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!