ಗಾಯಾಳು ಹಿಂದೂ ಸಂಘಟನೆ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಚರಂತಿಮಠ

ಹೊಸದಿಗಂತ ವರದಿ, ಬಾಗಲಕೋಟೆ:
ಜಿಲ್ಲೆಯ ಕೆರೂರ ಪಟ್ಟಣದಲ್ಲಿ ಬುಧವಾರ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ಗಾಯಗೊಂಡು ನಗರದ ಕೆರೂಡಿ ಆಸ್ಪತ್ರೆಗೆ ದಾಖಲಾಗಿರುವ ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರ ಆರೋಗ್ಯವನ್ನು ಶಾಸಕ ವೀರಣ್ಣ ಚರಂತಿಮಠ  ವಿಚಾರಿಸಿದರು.
ಕೆರೂರ ಪಟ್ಟಣದಲ್ಲಿ ನಡೆದ ಗಲಾಟೆಯಲ್ಲಿ‌ ದುಷ್ಕರ್ಮಿಗಳಿಂದ ಗಾಯಗೊಂಡಿರುವ ಹಿಂದೂ ಸಂಘಟನೆ ಯುವಕ ಅರುಣ್ ಕಟ್ಟಿಮನಿ,ಲಕ್ಷ್ಮಣ‌ ಕಟ್ಟಿಮನಿಯವರನ್ನು ಆರೋಗ್ಯವನ್ನು ಶಾಸಕರು ವಿಚಾರಿಸಿ ಧೈರ್ಯ ತುಂಬುವ ಕೆಲಸ ಮಾಡಿ‌ ನಂತರ ಆಸ್ಪತ್ರೆಯ ವೈದ್ಯರೊಂದಿಗೆ‌ ಚರ್ಚಿಸಿದರು.
ಹಲ್ಲೆ ಮಾಡಿರುವ ದುಷ್ಕರ್ಮಿಗಳ ಮೇಲೆ ಸೂಕ್ತ ಕ್ರಮ‌ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಾಸಕರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!