ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಶಾಸಕ ಯು.ಟಿ. ಖಾದರ್ ಖಂಡಿಸಿದ್ದಾರೆ. ತಪ್ಪಿತಸ್ಥರನ್ನು ಶೀಘ್ರ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಮೃತಪಟ್ಟ ಮಶೂದ್, ಪ್ರವೀಣ್ ಕುಟುಂಬಕ್ಕೆ ಗರಿಷ್ಠ ಮೊತ್ತದ ಪರಿಹಾರ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.
ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಕಳೆದ ನಾಲ್ಕೈದು ದಿನಗಳ ಅವಧಿಯಲ್ಲಿ ಮಸೂದ್ ಮತ್ತು ಪ್ರವೀಣ್ ಹತ್ಯೆಯಾಗಿದ್ದು ಅತ್ಯಂತ ನೋವಿನ ವಿಚಾರವಾಗಿದೆ. ಗೂಂಡಾಗಳಿಗೆ, ಕೊಲೆಗಡುಕರಿಗೆ ಸರಕಾರ ಮತ್ತು ಕಾನೂನಿನ ಭಯವಿಲ್ಲ ಎಂದು ಇದರಿಂದ ಸಾಬೀತಾಗಿದೆ. ಘಟನೆಯ ಸೂಕ್ಷ್ಮತೆಯನ್ನು ಸರ್ಕಾರ ಎಚ್ಚರಿಕೆ ವಹಿಸಬೇಕಿತ್ತು ಎಂದು ಅವರು ಹೇಳಿದ್ದಾರೆ.
ಈ ಎಲ್ಲಾ ಘಟನೆಗಳನ್ನು ಭೇದಿಸುವುದರ ಮೂಲಕ ನೈಜ ಅಪರಾಧಿಗಳನ್ನು ಆದಷ್ಟು ಬೇಗನೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಅವರು ಸರಕಾರವನ್ನು ಆಗ್ರಹಿಸಿದ್ದಾರೆ.