ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮ್ಮ ಕ್ಷೇತ್ರದ ರಸ್ತೆ ಅಭಿವೃದ್ಧಿ ಕಾಮಗಾರಿ ಶಿಲಾನ್ಯಾಸ ಸಂದರ್ಭ ಖುದ್ದು ತಾವೇ ಜೆಸಿಬಿ ಕ್ಯಾಬೀನ್ ಏರಿ ಕೆಲಸ ಮಾಡಿ ನಾಗರಿಕರ ಹುಬ್ಬೇರುವಂತೆ ಮಾಡಿದ್ದಾರೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಸಂಜೀವ ಮಠಂದೂರು!
ಪುತ್ತೂರು ವಿಧಾನಸಭಾ ಕ್ಷೇತ್ರದ ಇಡ್ಕಿದು ಗ್ರಾಮದ ಸೂರ್ಯ-ಕೋಲ್ಪೆ ದೇವಸ್ಥಾನ ಸಂಪರ್ಕ ರಸ್ತೆ ಕಾಂಕ್ರೀಟ್ ಕಾಮಗಾರಿ ಅಭಿವೃದ್ಧಿಗೆ ರೂ.50 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಇದರ ಶಿಲಾನ್ಯಾಸ ಕಾರ್ಯಕ್ರಮವನ್ನು ಶಾಸಕರಾದ ಸಂಜೀವ ಮಠಂದೂರು ನೆರವೇರಿಸಿದರು. ಇದರ ಬಳಿಕ ನೇರ ಜೆಸಿಬಿ ಯಂತ್ರದ ಬಳಿಗೆ ಬಂದ ಶಾಸಕರು, ತಾವೇ ಜೆಸಿಬಿ ಚಲಾಯಿಸಿ ಸ್ವಲ್ಪ ಹೊತ್ತು ಕೆಲಸ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.