ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರಕಾರ ಹೊರಡಿಸಿರುವ ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತವನ್ನು ಫೆ.11ರ ಒಳಗೆ ಪಾವತಿಸಿದರೇ ಶೇ.50 ವಿನಾಯಿತಿಯನ್ನು ಮೈಸೂರಿನ ಚಾಮರಾಜ ವಿಧಾಸಭಾ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರು ಸದುಪಯೋಗಪಡಿಸಿಕೊಂಡಿದ್ದಾರೆ.
ವೇಗದ ಕಾರು ಚಾಲನೆಗೆ ಶಾಸಕ ಎಲ್.ನಾಗೇಂದ್ರ 7 ಸಾವಿರ ರೂ. ದಂಡ ಕಟ್ಟಬೇಕಾಗಿತ್ತು. ಇದೀಗ 50% ರಿಯಾಯಿತಿಯೊಂದಿಗೆ ಮೈಸೂರಿನ ಮೆಟ್ರೋಪೋಲ್ ವೃತ್ತದಲ್ಲಿ ದಂಡ ಪಾವತಿಸಿದ್ದಾರೆ.