ಸಿಎಂಗೆ ಬೆಳ್ಳಿ ಮೂರ್ತಿ ಕಾಣಿಕೆ ನೀಡಿದ ಶಾಸಕ ಪರಣ್ಣ

ಹೊಸದಿಗಂತ ವರದಿ, ಕೊಪ್ಪಳ:
ವಿಶ್ವ ಪ್ರಸಿದ್ದ ಅಂಜನಾದ್ರಿಯ ಅಭಿವೃದ್ಧಿ ಕೈಗೊಳ್ಳಲು ಕೊಪ್ಪಳ ಜಿಲ್ಲೆಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಕಿಷ್ಕಿಂದೆಯ ಅಂಜಿನಾದ್ರಿಗೆ ಆಗಮಿಸಿ ಬೆಟ್ಟದ ಕೆಳಗೆ ಹನುಮಂತನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು. ವಿವಿಧ ಮಂತ್ರಗಳ ಪಠಣ ಮಾಡಿದರು.
ಸಾಷ್ಟಾಂಗ ನಮಸ್ಕಾರ ಹಾಕಿದ ಸಿಎಂ
ಸಿಎಂ ಬಸವರಾಜ ಬೊಮ್ಮಾಯಿ ಅವರು ಅಂಜಿನಾದ್ರಿ ಬೆಟ್ಟದ ಕೆಳಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತಿಯಿಂದ ಸಾಷ್ಟಾಂಗ ನಮಸ್ಕಾರ ಹಾಕಿ ಗಮನ ಸೆಳೆದರು. ಅಂಜಿನಾದ್ರಿ ಆಡಳಿತ ಮಂಡಳಿಯಿಂದ ಸಿಎಂಗೆ ಸನ್ಮಾನ ಮಾಡಿ ಆಂಜಿನೇಯನ ಭಾವಚಿತ್ರ ಕಾಣಿಕೆಯಾಗಿ ನೀಡಳಾಯಿತು.
ಸಿಎಂಗೆ ಬೆಳ್ಳಿ ಮೂರ್ತಿ ಕಾಣಿಕೆ :
ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಆಂಜಿನೇಯನ ಬೆಳ್ಳಿ ಮೂರ್ತಿ ಕಾಣಿಕೆಯಾಗಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!