ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಂದೂ ಧರ್ಮ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ.ಜೊತೆಗೆ ಜನತೆಯಲ್ಲಿ ವಿಷಾದವನ್ನು ವ್ಯಕ್ತ ಪಡಿಸಿದ್ದಾರೆ.
ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹಿಂದೂ ಪದದ ಬಗ್ಗೆ ತಾವು ಹೇಳಿದ್ದಂತ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಈ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೇ ವಿಷಾಧಿಸುತ್ತೇನೆ ಎಂದಿದ್ದಾರೆ.
ನನ್ನ ಹೇಳಿಕೆ ತಪ್ಪಾಗಿದ್ದರೆ ತನಿಖೆಗೆ ಸಮಿತಿ ರಚಿಸುವಂತೆ ಕೋರಿ ಸಿಎಂ ಬೊಮ್ಮಾಯಿಗೆ ಸತೀಶ್ ಜಾರಕಿಹೊಳಿ ಪತ್ರ ಬರೆದಿದ್ದಾರೆ.
ಸತೀಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ರಾಜ್ಯದಲ್ಲಿ ಬಿಜೆಪಿ ಸೇರಿದಂತೆ ಜೆಡಿಎಸ್ ನಿಂದಲೂ ವ್ಯಾಪಕ ವಿರೋಧ, ಆಕ್ಷೇಪ ವ್ಯಕ್ತವಾಗಿತ್ತು.