ಕಾಂಗ್ರೆಸ್ ಗೆ ಸೇರ್ಪಡೆಯಾದ ಶಾಸಕ ಎಸ್​ಟಿ ಸೋಮಶೇಖರ್ ಬೆಂಬಲಿಗರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ (S.T.Somashekhar) ಅವರ ಬೆಂಬಲಿಗರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಸಮ್ಮುಖದಲ್ಲಿ ಇಂದು ಸೋಮಶೇಖರ್ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಬಿಬಿಎಂಪಿ ಮಾಜಿ ಸದಸ್ಯರಾದ ಆರ್ಯ ಶ್ರೀನಿವಾಸ್​, ರಾಜಣ್ಣ, ಜಿ.ಪಂ. ಮಾಜಿ ಸದಸ್ಯರಾದ ಶಿವಮಾದಯ್ಯ, ಹನುಮಂತೇಗೌಡ, ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ, ನೆಲಮಂಗಲ ಕಾಂಗ್ರೆಸ್​​ ಶಾಸಕ ಎನ್.ಶ್ರೀನಿವಾಸ್, ಆನೇಕಲ್ ಕಾಂಗ್ರೆಸ್ ಶಾಸಕ ಬಿ.ಶಿವಣ್ಣ ಉಪಸ್ಥಿತರಿದ್ದರು.

ಇದೇ ವೇಳೆ ಮಾತನಾಡಿದ ಮಾಜಿ ಪಾಲಿಕೆ ಸದಸ್ಯ ರಾಜಣ್ಣ, ಸೋಮಶೇಖರ್ ಅವರಿಗೆ ಬಿಜೆಪಿಯಲ್ಲಿ ಇಲ್ಲಸಲ್ಲದ‌ ಕಾಟ ಕೊಡುತ್ತಿದ್ದಾರೆ. ಹೀಗಾಗಿ ಸೋಮಶೇಖರ್ ಅವರು ಆದಷ್ಟು ಬೇಗ ಕಾಂಗ್ರೆಸ್ ಪಕ್ಷಕ್ಕೆ ಬರಬೇಕು ಎಂದು ವೇದಿಕೆ ಮೇಲೆಯೇ ಆಹ್ವಾನ ನೀಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!