ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಂಎಲ್ಎ ಟಿಕೆಟ್ ನೀಡುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿದ ಪ್ರಕರಣದ ಎ-5 ಆರೋಪಿ ಚೆನ್ನ ನಾಯ್ಕ್ನ (Channa Nayak) ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ (Bengaluru) ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಯಶವಂತಪುರ ಬಳಿ ಸಿಸಿಬಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆವಂಚನೆ ಪ್ರಕರಣದಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಪಾತ್ರ ನಿರ್ವಹಿಸಿದ್ದನು.
ಈಗಾಗಲೇ ಚೈತ್ರಾ ಕುಂದಾಪುರ ಮತ್ತು ತಂಡವನ್ನ ಸಿಸಿಬಿ ಪೊಲೀಸರು (CCB Police) ವಶಕ್ಕೆ ಪಡೆದಿದ್ದು, 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೋರ್ಟ್ ಒಪ್ಪಿಸಿದೆ.