ಕಾಂಗ್ರೆಸ್ ಔತಣಕೂಟದಲ್ಲಿ ಶಾಸಕರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಗರಂ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಕಾಂಗ್ರೆಸ್ ಔತಣಕೂಟದಲ್ಲಿ ಬಿಜೆಪಿ ಶಾಸಕಾರಾದ ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮಶೇಖರ್, ಹೆಚ್.ವಿಶ್ವನಾಥ್ ಭಾಗಿ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗರಂ ಆಗಿದ್ದು, ಇದೊಂದು ಗಂಭೀರ ವಿಚಾರವಾಗಿದೆ ಎಂದು ಕಿಡಿಕಾರಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಡಿ.ಕೆ.ಶಿವಕುಮಾರ್ ಔತಣಕೂಟದಲ್ಲಿ ಬಿಜೆಪಿಯ ಕೆಲ ಶಾಸಕರು ಭಾಗಿಯಾಗಿರುವುದು ಗಂಭೀರವಾಚಾರ. ಇಂದೇ ಅವರನ್ನು ಕರೆದು ಚರ್ಚಿಸುತ್ತೇನೆ ಎಂದರು.

ಇದೇ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ವಿಜಯೇಂದ್ರ, ಸಿದ್ದರಾಮಯ್ಯಗೆ ರಾಜಕೀಯ ಪುನರ್ಜನ್ಮ ನೀಡಿದ್ದು ಬಾದಾಮಿ ಕ್ಷೇತ್ರ. ಅಲ್ಪಸಂಖ್ಯಾತರಿಗೆ ಹತ್ತು ಸಾವಿರ ಕೋಟಿ ಕೊಡುತ್ತೇನೆ ಎಂದಿದ್ದಾರೆ. ಅಲ್ಪಸಂಖ್ಯಾತರಿಗೆ ಹಣ ಕೊಡುವವರಿಗೆ ರೈತರ ಬಗ್ಗೆ ಯಾಕೆ ಕಾಳಜಿ ಇಲ್ಲ? ನೀವು ಅಲ್ಪಸಂಖ್ಯಾತರ ವೋಟಿನಿಂದ ಮಾತ್ರ ಅಧಿಕಾರಕ್ಕೆ ಬಂದಿದ್ದೀರಾ? ಜವಾಬ್ದಾರಿಯುತ ಸ್ಥಾನದಲ್ಲಿದ್ದು ಸಿಎಂ ಕ್ರಮವನ್ನು ಖಂಡಿಸುತ್ತೇನೆ ಎಂದು ಗುಡುಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!