ಹೊಸದಿಗಂತ ವರದಿ, ಕೊಡಗು:
ಗೋಣಿಕೊಪ್ಪ ಪಟ್ಟಣದಲ್ಲಿ ಮನೆ ಮನೆಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಜಲ ಜೀವನ್ ಯೋಜನೆಗೆ ಶಾಸಕ ಕೆ.ಜಿ ಬೋಪಯ್ಯ ಅವರು ಚಾಲನೆ ನೀಡಿದರು.
ಜಲ ಜೀವನ ಯೋಜನೆಯಡಿ ಸುಮಾರು 60.72ಲಕ್ಷ ರೂ ವೆಚ್ಚದಲ್ಲಿ ಅನುದಾನದಲ್ಲಿ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ 105 ಮನೆಗಳಿಗೆ ನಲ್ಲಿ ನೀರು ಸರಬರಾಜು ಹಾಗೂ ಗೋಣಿಕೊಪ್ಪ ಪಂಚಾಯಿತಿ ವ್ಯಾಪ್ತಿಯ 1ನೇ ವಿಭಾಗದ ಶ್ರೀ ಉಮಾಮಹೇಶ್ವರಿ ಬಡಾವಣೆಯಲ್ಲಿ ಶಾಸಕರ 25 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಲಾದ ಕುಡಿಯುವ ನೀರಿನ ಟ್ಯಾಂಕ್ ನ್ನು ಇದೇ ಸಂದರ್ಭದಲ್ಲಿ ಶಾಸಕರು ಲೋಕಾರ್ಪಣೆಗೋಳಿಸಿದರು.
ಈ ಸಂದರ್ಭ ಜಿ.ಪಂ ಸದಸ್ಯ ಸಿ.ಕೆ ಬೋಪಣ್ಣ , ಗೋಣಿಕೊಪ್ಪ ಗ್ರಾಪಂ ಅಧ್ಯಕ್ಷೆ ಸೆಲ್ವಿ, ಸದಸ್ಯರಾದ ಬಿ.ಎನ್ ಪ್ರಕಶ್, ರಾಮ ಕೃಷ್ಣ,ನೂರೆರ ರತಿ ಅಚ್ಚಪ್ಪ, ಮಂಜು ಸುರೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್, ಜಿ.ಪಂ ಇಂಜಿನಿಯರ್ ಮಹದೇವ್, ಗ್ರಾಮಿಣ ಕುಡಿಯುವ ನೀರು ಅಭಿವೃದ್ಧಿ ಇಲಾಖೆ ಅಧಿಕಾರಿ ಯೋಗೇಶ್ ಗೌಡ \, ಜಿಮ್ಮ ಸುಬ್ಬಯ್ಯ,ಪ್ರೊ. ಇಟ್ಟಿರ ಬಿದ್ದಪ್ಪ, ಕಮಲಾಕ್ಷಿ ಬಿದ್ದಪ್ಪ ಮತ್ತಿತರರು ಹಾಜರಿದ್ದರು.