ಮೊಬೈಲ್ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಹೊಸ ದಿಗಂತ ವರದಿ, ಅಂಕೋಲಾ:

ತಾಲೂಕಿನ ಅವರ್ಸಾದ ಮೊಬೈಲ್ ಅಂಗಡಿಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕೋಲಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅವರ್ಸಾ ಸಕಲಬೇಣ ನಿವಾಸಿ ಸಿದ್ಧಾರ್ಥ ಚೋಕಪ್ಪ ನಾಯ್ಕ (30) ಮತ್ತು ರಮಾಕಾಂತ ಘನಶ್ಯಾಮ ನಾಯ್ಕ (33) ಬಂಧಿತ ಆರೋಪಿಗಳಾಗಿದ್ದು ಇವರಿಂದ 12 ಸಾವಿರ ಮೌಲ್ಯದ ರಿಯಲ್ ಮಿ ಸಿ2 ಮತ್ತು 10 ಸಾವಿರ ಮೌಲ್ಯದ ಎಂ.ಐ ನೋಟ್ 4 ಮೊಬೈಲ್ ಪೋನುಗಳು ಕೃತ್ಯದ ಸಂದರ್ಭದಲ್ಲಿ ಬಳಸಿದ ಕೀ ಪ್ಯಾಡ್ ಮೊಬೈಲ್ ಪೋನ್ ವಶಪಡಿಸಿಕೊಳ್ಳಲಾಗಿದೆ.
ಬುಧವಾರ ರಾತ್ರಿ ಅವರ್ಸಾದ ನಿವಾಸಿ ಸಂಜೀವ ನಾಯ್ಕ ಎನ್ನುವವರು ಅಂಗಡಿ ಬಂದ್ ಮಾಡಿ ತೆರಳಿದ ನಂತರ ಆರೋಪಿಗಳು ಕಳ್ಳತನದ ಕೃತ್ಯ ಎಸಗಿ ಎರಡು ಮೊಬೈಲ್ ಸೆಟ್ ಮತ್ತು 1 ಸಾವಿರ ರೂಪಾಯಿ ನಗದು ಕಳ್ಳತನ ಮಾಡಿ ತೆರಳಿದ್ದರು, ಆರೋಪಿಗಳ ಕೃತ್ಯ ಸಿ.ಸಿ ಟಿ.ವಿ ಕ್ಯಾಮೆರಾ ದಲ್ಲಿ ಸೆರೆಯಾಗಿತ್ತು ಮತ್ತು ಈ ಕುರಿತು ಅಂಕೋಲಾ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿತ್ತು.
ಅಂಕೋಲಾ ಪೊಲೀಸ್ ನಿರೀಕ್ಷಕ ಸಂತೋಷ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಪಿ.ಎಸ್. ಐ ಪ್ರವಿಣಕುಮಾರ್, ಮಹಾಂತೇಶ ವಾಲ್ಮೀಕಿ ಮತ್ತು ಸಿಬ್ಬಂದಿಗಳು ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಂಕೋಲಾ ಪೊಲೀಸರ ಕಾರ್ಯಕ್ಕೆ ಪೊಲೀಸ್ ವರಿಷ್ಠೆ ಡಾ ಸುಮನ್ ಪನ್ನೇಕರ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬದರಿನಾಥ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!