ಹೊಸದಿಗಂತ, ಕಲಬುರಗಿ:
ಕಲಬುರಗಿ ನೆರೆಯ ಮಹಾರಾಷ್ಟ್ರ ರಾಜ್ಯದ ಸೋಲಾಪುರ ಜಿಲ್ಲೆಯಲ್ಲಿ ಪಿಎಂ ಆವಾಸ್ ಯೋಜನೆಯಡಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಭಾಗಿಯಾಗಲು ಶುಕ್ರವಾರ ಬೆಳಗ್ಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಿದ್ದಾರೆ.
ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಕಲಬುರಗಿ ಏರ್ಪೋರ್ಟ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಕೇಂದ್ರ ಸಚಿವ ಭಗವಂತ ಖೂಬಾ ಸೇರಿದಂತೆ ಹಲವು ಪ್ರಮುಖ ನಾಯಕರು ಬರಮಾಡಿಕೊಂಡರು.
ಸೇನಾ ಹೆಲಿಕ್ಯಾಪ್ಟರ್ ಮೂಲಕ ಸೋಲಾಪುರ ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ, ಮತ್ತೆ ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ,ಇಲ್ಲಿಂದ ಬೆಂಗಳೂರಿಗೆ ತೆರಳಲಿದ್ದಾರೆ.