ಮೋದಿ ಸಹೋದರನ ಕಾರು ಅಪಘಾತ ಪ್ರಕರಣ: ಚಾಲಕನ ವಿರುದ್ಧ ಎಫ್​ಐಆರ್ ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮೈಸೂರಿನ ಕಡಕೊಳ ಬಳಿ ನಡೆದ ಪ್ರಧಾನಿ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಅವರ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಎನ್.ಸತ್ಯನಾರಾಯಣ ಅವರ ವಿರುದ್ಧ ಮೈಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿ.27ರಂದು ಮೈಸೂರಿನಿಂದ ಬಂಡೀಪುರಕ್ಕೆ ತೆರಳುವಾಗ ಕಡಕೊಳ ಬಳಿ ಡಿವೈಡರ್‌ಗೆ ಗುದ್ದಿ ಕಾರು ಅಪಘಾತ ಸಂಭವಿಸಿತ್ತು. ಇದೀಗ ಕಾರು ಚಾಲಕ ಎನ್.ಸತ್ಯನಾರಾಯಣ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಐಪಿಸಿ ಕಲಂ 279 (ಅತಿಯಾದ ವೇಗ), 337 (ನಿರ್ಲಕ್ಷ್ಯದ ಚಾಲನೆ) ಅಡಿಯಲ್ಲಿ ಕೇಸು ದಾಖಲಿಸಲಾಗಿದೆ. ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದಲೇ ಕಾರು ಅಪಘಾತಕ್ಕೀಡಾಗಿದೆ ಎಂದು ಬೆಂಗಾವಲು ಪಡೆಯ ಎಆರ್‌ಎಸ್‌ಐ ಎಸ್.ಮಹದೇವ ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!