ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಹಸಿರು ನಿಶಾನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣಕ್ಕೆ ಪ್ರವಾಸ ಕೈಗೊಂಡಿದ್ದು, ಸಿಕಂದರಾಬಾದ್ ಮತ್ತು ತಿರುಪತಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದರು. ಇದು ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಸುಮಾರು ಮೂರೂವರೆ ಗಂಟೆಗಳಷ್ಟು ಕಡಿಮೆ ಮಾಡುತ್ತದೆ.

ಶನಿವಾರ ಸಿಕಂದರಾಬಾದ್‌ನಲ್ಲಿ ನೂತನ ರೈಲ್ವೇ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸಿಕಂದರಾಬಾದ್ ನಿಲ್ದಾಣದಲ್ಲಿಯೇ ರೈಲಿಗೆ ಚಾಲನೆ ನೀಡಿದರು. ದೇಶದ 13 ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿರುವ ಈ ರೈಲಿನ ವಿಶೇಷತೆಗಳ ಬಗ್ಗೆ ತಿಳಿಯಿರಿ.

  •  ಸಿಕಂದರಾಬಾದ್‌ನಿಂದ ತಿರುಪತಿಗೆ ಸೂಪರ್ ಫಾಸ್ಟ್ ರೈಲಿನಲ್ಲಿ ಪ್ರಯಾಣಿಸಲು 12 ಗಂಟೆ ತೆಗೆದುಕೊಳ್ಳುತ್ತದೆ. ಅದೇ ವಂದೇ ಭಾರತ್ ರೈಲಿನಲ್ಲಿ ಸಿಕಂದರಾಬಾದ್‌ನಿಂದ ತಿರುಪತಿಗೆ 8.30 ಗಂಟೆಗಳಲ್ಲಿ ತಲುಪಬಹುದು.
  • ಇದು ದೇಶದ 13ನೇ ವಂದೇ ಭಾರತ್ ರೈಲು.. 8 ಕೋಚ್‌ಗಳು ಮತ್ತು 530 ಆಸನ ಸಾಮರ್ಥ್ಯ ಹೊಂದಿದೆ.
  • 1 ಎಕ್ಸಿಕ್ಯೂಟಿವ್, 7 ಚೇರ್ ಕಾರ್ ಕೋಚ್‌ಗಳು ಇರುತ್ತವೆ.
  • ಪ್ರಯಾಣಿಕರ ಬೇಡಿಕೆಯಿಂದಾಗಿ ಕೋಚ್‌ಗಳನ್ನು ಹೆಚ್ಚಿಸುವ ಸಾಧ್ಯತೆ ಇದೆ.
  • ರೈಲು 9 ರಿಂದ ಬೆಳಿಗ್ಗೆ 6 ಗಂಟೆಗೆ ಪ್ರಯಾಣಿಕರಿಗೆ ಲಭ್ಯವಿರುತ್ತದೆ.
  • ವಂದೇ ಭಾರತ್ ರೈಲು ಸಿಕಂದರಾಬಾದ್-ತಿರುಪತಿ ನಡುವೆ ವಾರದಲ್ಲಿ 6 ದಿನ ಮಾತ್ರ ಚಲಿಸುತ್ತದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!