ಬಡವರಿಗೆ ಉಚಿತ ಆಹಾರ ಧಾನ್ಯ ವಿತರಣೆ ಮತ್ತೆ 6 ತಿಂಗಳು ವಿಸ್ತರಣೆ; ಪ್ರಧಾನಿ ಮೋದಿ ಮಹತ್ವದ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY)ಯನ್ನು ಇನ್ನೂ ಆರು ತಿಂಗಳವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದೆ.
ಈ ಕುರಿತು ಟ್ವಿಟ್‌ ಮೂಲಕ ಮಾಹಿತಿ ನೀಡಿರುವ ಪ್ರಧಾನಿ ಮೋದಿ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಈ ವರ್ಷದ ಸೆಪ್ಟೆಂಬರ್‌ ವರೆಗೆ ಅಂದರೆ ಇನ್ನೂ 6 ತಿಂಗಳವರೆಗೆ ವಿಸ್ತರಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ದೇಶದ 80 ಕೋಟಿಗೂ ಹೆಚ್ಚು ಜನರು ಈ ಯೋಜನೆಯ ಲಾಭವನ್ನು ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.
ಕೊರೋನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಬಡಜನರಿಗೆ ನೆರವಾಗಲು ಮಾರ್ಚ್ 2020ರಲ್ಲಿ ಕೇಂದ್ರ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿತ್ತು. ಪಡಿತರ ಕಾರ್ಡುದಾರರಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಆಹಾರ ಧಾನ್ಯಗಳನ್ನು ಈ ಯೋಜನೆಯ ಮೂಲಕ ಒದಗಿಸಲಾಗುತ್ತದೆ. ಈ ಯೋಜನೆಯಡಿ ಕೇಂದ್ರವು ತಿಂಗಳಿಗೆ 5 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲಾಗುತ್ತದೆ. ಕೇಂದ್ರವು 2.6 ಟ್ರಿಲಿಯನ್ ರೂ.ಗಳನ್ನು ಈ ಯೋಜನೆಗಾಗಿ ಇಲ್ಲಿಯವರೆಗೆ ಖರ್ಚು ಮಾಡಿದೆ. ಮುಂದಿನ 6 ತಿಂಗಳುಗಳಲ್ಲಿ 80,000 ಕೋಟಿ ರೂಪಾಯಿಗಳನ್ನು ಯೋಜನೆಗೆ ಖರ್ಚು ಮಾಡಲಾಗುವುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!