ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಬಾರಿ 141 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇದು ಪ್ರಜಾಪ್ರಭುತ್ವದ ಕತ್ತು ಹಿಸುಕಿದಂತೆ ಎಂದು ಕಾಂಗ್ರೆಸ್ ಸಂಸದೀಯಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಹೇಳಿದ್ದಾರೆ.
ವಿರೋಧ ಪಕ್ಷದ 141 ಸಂಸದರನ್ನು ಅಮಾನತುಗೊಳಿಸಿ ಮೋದಿ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ. ನಮಗೆ ನ್ಯಾಯ ಬೇಕು, ನ್ಯಾಯವಾಗಿ ಮಾತನಾಡಿದ್ದನ್ನು ಒಪ್ಪದೇ ಸಂಸದರನ್ನು ಹೊರಕಳಿಸಲಾಗಿದೆ ಇದು ಸರಿಯಲ್ಲ ಎಂದು ಹೇಳಿದ್ದಾರೆ.
ಸಂಸತ್ನಲ್ಲಿ ಅಶಿಸ್ತಿನ ನಡವಳಿಕೆ ತೋರಿದ 141 ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅಮಾನತುಗೊಳಿಸಿದ್ದಾರೆ. ಇಷ್ಟೊಂದು ಸಂಸದರು ಅಮಾನತು ಆಗಿರುವುದು ಇದೇ ಮೊದಲು.