ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸದ ಜನಾರ್ದನರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿರುವುದು ಬಿಜೆಪಿಗೆ ಸೇರುವ ಅಥವಾ ಬೆಂಬಲಿಸುವ ಸುಳಿವು ನೀಡುತ್ತಿದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಕಾರ್ಯಕ್ರಮವೊಂದರಲ್ಲಿ, ರೆಡ್ಡಿ ಕಾಂಗ್ರೆಸ್ ನಾಯಕರನ್ನು ಟೀಕಿಸುವಾಗ ಮೋದಿಯನ್ನು ಬಹಿರಂಗವಾಗಿ ಹೊಗಳಿದರು. ಶ್ರೀರಾಮ ಮಂದಿರ ನಿರ್ಮಿಸಿದ ಮೋದಿಜಿಯವರನ್ನು ಅಭಿನಂದಿಸಲೇಬೇಕು. ಇಡೀ ವಿಶ್ವವೇ ನೋಡುವ ಕೆಲಸವನ್ನು ಮೋದಿ ಮಾಡಿದ್ದಾರೆ. 500 ವರ್ಷಗಳ ಹೋರಾಟದ ಫಲ ಈಗಾಗಲೇ ಬಂದಿದೆ ಎಂದರು.
ಗಂಗಾವತಿ ಅಭಿವೃದ್ಧಿಗೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅಡ್ಡಿ ಮಾಡುತ್ತಿದ್ದಾರೆ. ಸೋಲಿನ ನಿರಾಸೆ ಇಕ್ಬಾಲ್ ಅನ್ಸಾರಿ ಅವರನ್ನು ಕಾಡುತ್ತಿದೆ. ಗಂಗಾವತಿ ಅಭಿವೃದ್ಧಿಗೆ ಪೂರಕವಾಗಿಲ್ಲ. ಅವರು ಕ್ಲುಲ್ಲಕ ವಿಚಾರದಲ್ಲೂ ಅಭಿವೃದ್ಧಿಯಲ್ಲಿ ಅಡ್ಡಿ ಆಗುತ್ತಿದ್ದಾರೆ. ಸಾರ್ವತ್ರಿಕ ಚುನಾವಣೆಯ ನಂತರ ಕಾಂಗ್ರೆಸ್ಸಿಗರು ಇಕ್ಬಾಲ್ ಅನ್ಸಾರಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ ಎಂದು ಕಿಡಿಕಾರಿದ್ದಾರೆ.