Tuesday, January 13, 2026
Tuesday, January 13, 2026
spot_img

ಪಿಎಂ ಕಿಸಾನ್ 21ನೇ ಕಂತು ಬಿಡುಗಡೆ ಮಾಡಿದ ಮೋದಿ: 9 ಕೋಟಿ ರೈತರ ಖಾತೆಗೆ ಸೇರಿತು 18,000 ಕೋಟಿ ಹಣ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ಕೊಯಮತ್ತೂರಿನಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 21ನೇ ಕಂತನ್ನು ಬಿಡುಗಡೆ ಮಾಡಿದರು.

ಈ ಮೂಲಕ ಒಂಬತ್ತು ಕೋಟಿಗೂ ಹೆಚ್ಚು ರೈತರಿಗೆ 18,000 ಕೋಟಿ ರೂ.ಗಳನ್ನ ವಿತರಿಸಿದ್ದಾರೆ. ಈ ಯೋಜನೆಯಡಿಯಲ್ಲಿ, ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳನ್ನ ಪಡೆಯುತ್ತಾರೆ. ವಾರ್ಷಿಕವಾಗಿ ಒಟ್ಟು 6,000 ರೂ.ಗಳನ್ನು ಡಿಬಿಟಿ (ನೇರ ಲಾಭ ವರ್ಗಾವಣೆ) ಮೂಲಕ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ನೀಡಲಾಗುತ್ತದೆ.

ಹಿಂದಿನ 20ನೇ ಕಂತನ್ನು ಆಗಸ್ಟ್‌’ನಲ್ಲಿ ಬಿಡುಗಡೆ ಮಾಡಲಾಗಿದ್ದು, 2.4 ಕೋಟಿ ಮಹಿಳಾ ರೈತರು ಸೇರಿದಂತೆ 9.8 ಕೋಟಿಗೂ ಹೆಚ್ಚು ರೈತರಿಗೆ ಪ್ರಯೋಜನವಾಗಿದೆ.

ಪಿಎಂ ಕಿಸಾನ್ : ಫಲಾನುಭವಿಗಳ ಸ್ಥಿತಿಯನ್ನು ಹೇಗೆ ಪರಿಶೀಲಿಸುವುದು?

  1. ಅಧಿಕೃತ ಪಿಎಂ ಕಿಸಾನ್ ಪೋರ್ಟಲ್‌ಗೆ ಭೇಟಿ ನೀಡಿ: https://pmkisan.gov.in
  2. ಮುಖಪುಟದಲ್ಲಿ, ‘ರೈತರ ಮೂಲೆ’ ಅಡಿಯಲ್ಲಿ, ‘ಫಲಾನುಭವಿಗಳ ಪಟ್ಟಿ’ ಮೇಲೆ ಕ್ಲಿಕ್ ಮಾಡಿ.
  3. ನಿಮ್ಮ ರಾಜ್ಯ, ಜಿಲ್ಲೆ, ಉಪ-ಜಿಲ್ಲೆ, ಬ್ಲಾಕ್ ಮತ್ತು ಗ್ರಾಮವನ್ನು ನಮೂದಿಸಿ.
  4. ನಿಮ್ಮ ಹಳ್ಳಿಯಲ್ಲಿರುವ ಫಲಾನುಭವಿಗಳ ಪಟ್ಟಿಯನ್ನು ವೀಕ್ಷಿಸಲು ‘ವರದಿ ಪಡೆಯಿರಿ’ ಕ್ಲಿಕ್ ಮಾಡಿ.

Most Read

error: Content is protected !!