ಬೆಳವಣಿಗೆಯ ಅವಕಾಶಗಳನ್ನು ಸೃಷ್ಟಿಸಲು ಹಣಕಾಸು ಸೇವೆಗಳ ದಕ್ಷತೆ ಹೆಚ್ಚಳ ಕುರಿತು ಮೋದಿ ಮಾತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

‘ಬೆಳವಣಿಗೆಯ ಅವಕಾಶಗಳನ್ನು ಸೃಷ್ಟಿಸಲು ಹಣಕಾಸು ಸೇವೆಗಳ ದಕ್ಷತೆಯನ್ನು ಹೆಚ್ಚಿಸುವ’ ಕುರಿತು ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ 10 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ.

ಬಜೆಟ್ ನಂತರದ ವೆಬಿನಾರ್, ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ಉಪಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಲೋಚನೆಗಳು ಮತ್ತು ಸಲಹೆಗಳನ್ನು ಪಡೆಯಲು ಸರ್ಕಾರವು ಆಯೋಜಿಸುತ್ತಿರುವ 12 ಬಜೆಟ್ ನಂತರದ ವೆಬಿನಾರ್‌ಗಳ ಸರಣಿ ಇದಾಗಿದೆ.

ಕೇಂದ್ರ ಬಜೆಟ್ ಏಳು ಆದ್ಯತೆಗಳನ್ನು ಅಳವಡಿಸಿಕೊಂಡಿದ್ದು, ಅಮೃತ ಕಾಲಕ್ಕೆ ಮಾರ್ಗದರ್ಶನ ನೀಡುವ ‘ಸಪ್ತರ್ಷಿ’ಯಂತೆ ಕಾರ್ಯನಿರ್ವಹಿಸುತ್ತದೆ. ಹಣಕಾಸು ವಲಯವು ಸರ್ಕಾರದ ಏಳು ಆದ್ಯತೆಗಳಲ್ಲಿ ಒಂದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!