ಇಂದು ಕಾಶಿ ತೆಲುಗು ಸಂಗಮ-ಗಂಗಾ ಪುಷ್ಕರ ಆರಾಧನೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು ವಾರಣಾಸಿಯಲ್ಲಿ ನಡೆಯಲಿರುವ ಕಾಶಿ ತೆಲುಗು ಸಂಗಮ-ಗಂಗಾ ಪುಷ್ಕರ ಆರಾಧನೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ವಾರಣಾಸಿಯಲ್ಲಿ ಇಂದು ಸಂಜೆ 6 ರಿಂದ ರಾತ್ರಿ 9ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಬಳಿಕ ಸಂಜೆ 7 ಗಂಟೆ ಸುಮಾರಿಗೆ ಪ್ರಧಾನಿ ಮೋದಿ ಕಾರ್ಯಕ್ರಮವನ್ನು ಉದ್ದೇಶಿಸಿ ಆನ್‌ಲೈನ್‌ ಮೂಲಕ ಮಾತನಾಡಲಿದ್ದಾರೆ.

ವಾರಣಾಸಿಯಲ್ಲಿ ಗಂಗಾ ಪುಷ್ಕರಲು ಹಬ್ಬವು ಏಪ್ರಿಲ್ 22 ರಿಂದ ಮೇ 3ರ ವರೆಗೆ ನಡೆಯಲಿದೆ. 12 ದಿನಗಳ ಕಾರ್ಯಕ್ರಮದಲ್ಲಿ, ಆಂಧ್ರಪ್ರದೇಶ ಮತ್ತು ತೆಲಂಗಾಣದಿಂದ ಹೆಚ್ಚಿನ ಸಂಖ್ಯೆಯ ಯಾತ್ರಾರ್ಥಿಗಳು ತಮ್ಮ ಪೂರ್ವಜರಿಗೆ ಪ್ರಾರ್ಥನೆ ಸಲ್ಲಿಸಲು ಕಾಶಿಗೆ ಭೇಟಿ ನೀಡುತ್ತಾರೆ.

ಪ್ರತಿ 12 ವರ್ಷಗಳಿಗೊಮ್ಮೆ ಈ ಹಬ್ಬವನ್ನು ಆಚರಿಸಲಾಗುತ್ತದೆ. ಕಾಶಿ-ತಮಿಳು ಸಂಗಮ ನಂತರ ಇತ್ತೀಚಿನ ದಿನಗಳಲ್ಲಿ ವಾರಣಾಸಿಯಲ್ಲಿ ಆಯೋಜಿಸಲಾದ ಎರಡನೇ ಕಾರ್ಯಕ್ರಮವಿದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!