September 16, 2026
Wednesday, September 16, 2026
spot_img

ನಾಳೆ ಮಂಡ್ಯದಲ್ಲಿ ಮೋದಿ ಹವಾ, ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ನಾಳೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.

ಶ್ರೀಕ್ಷೇತ್ರದ ಮಾಜಿ ಪೀಠಾಧಿಪತಿಗಳಾದ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣಾರ್ಥ ನಿರ್ಮಾಣಗೊಂಡಿರುವ ಭವ್ಯ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಪ್ರಧಾನಿ ಲೋಕಾರ್ಪಣೆಗೊಳಿಸಲಿದ್ದಾರೆ. ಬಳಿಕ ಭಕ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಪ್ರಧಾನಿ ಆಗಮನಕ್ಕೆ ಕೇವಲ ಒಂದು ದಿನವಷ್ಟೇ ಬಾಕಿ ಇದ್ದು, ಮಂಡ್ಯದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇಡೀ ಮಂಡ್ಯ ಅಲಂಕಾರದಲ್ಲಿ ಕಂಗೊಳಿಸುತ್ತಿದೆ. ಕಾರ್ಯಕ್ರಮಕ್ಕಾಗಿ ಬಿಜಿಎಸ್ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಒಂದು ಲಕ್ಷಕ್ಕೂ ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಮುನ್ನೆಚ್ಚರಿಕಾ ಕ್ರಮವಾಗಿ 2000ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !