ಕೃಷ್ಣಂರಾಜು ನಿಧನಕ್ಕೆ ಪ್ರಧಾನಿ ಸಂತಾಪ: ಸರ್ಕಾರಿ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆಗೆ ಕೆಸಿಆರ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ‌

ಚಿತ್ರನಟ ಕೃಷ್ಣಂರಾಜು ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ʻಕೃಷ್ಣಂರಾಜು ಅವರ ನಿಧನ ನನಗೆ ಆಘಾತ ತಂದಿದ್ದು, ಮುಂದಿನ ಪೀಳಿಗೆಗಳು ಸಿನಿಮಾ ಕ್ಷೇತ್ರದಲ್ಲಿ ಅವರ ಸೇವೆಯನ್ನು ಸ್ಮರಿಸಲಿವೆ. ಸಮಾಜ ಸೇವೆಯಲ್ಲೂ ಮುಂಚೂಣಿಯಲ್ಲಿದ್ದು ರಾಜಕೀಯ ನಾಯಕರಾಗಿ ಛಾಪು ಮೂಡಿಸಿದ್ದರು. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ. ಓಂ ಶಾಂತಿʼ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ಕೃಷ್ಣಂರಾಜ್ ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ವಿಧಿವಿಧಾನಗಳೊಂದಿಗೆ ನಡೆಸಲಾಗುವುದು. ಈ ನಿಟ್ಟಿನಲ್ಲಿ ತೆಲಂಗಾಣ ಸಿಎಂ ಕೆಸಿಆರ್ ಅಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ. ಕೃಷ್ಣಂ ರಾಜು ಅವರು ಕೇಂದ್ರದ ಮಾಜಿ ಸಚಿವರಷ್ಟೇ ಅಲ್ಲ ಅವರ ಆತ್ಮೀಯ ಸ್ನೇಹಿತರೂ ಆಗಿದ್ದಾರೆ ಎಂದು ಕೆಸಿಆರ್ ಹೇಳಿದ್ದಾರೆ. ಸಿಎಂ ಆದೇಶದಂತೆ ತೆಲಂಗಾಣ ಸಿಎಸ್ ಸೋಮೇಶ್ ಕುಮಾರ್ ಕೃಷ್ಣಂರಾಜು ಅವರ ಅಂತಿಮ ಸಂಸ್ಕಾರವನ್ನು ಅಧಿಕೃತವಾಗಿ ನಡೆಸಲು ವ್ಯವಸ್ಥೆ ಮಾಡುತ್ತಿದ್ದಾರೆ. ಇನ್ನು ಸ್ವಲ್ಪ ಹೊತ್ತಿನಲ್ಲಿ ಕೃಷ್ಣಮರಾಜ್ ಅವರ ಪಾರ್ಥಿವ ಶರೀರ ಆಸ್ಪತ್ರೆಯಿಂದ ಅವರ ನಿವಾಸಕ್ಕೆ ತಲುಪಲಿದೆ. ಅಭಿಮಾನಿಗಳು ಮತ್ತು ಆಪ್ತ ಸ್ನೇಹಿತರ ಭೇಟಿಗೆ ಅಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗುತ್ತಿದೆ.

ಸೋಮವಾರ ಮಧ್ಯಾಹ್ನ ಕೃಷ್ಣಮರಾಜ್ ಅವರ ಅಂತಿಮ ಸಂಸ್ಕಾರ ನಡೆಯಲಿದೆ. ಕೃಷ್ಣಂರಾಜು ನಿಧನಕ್ಕೆ ಎಪಿ ಸಿಎಂ ಜಗನ್ ಮೋಹನ್ ರೆಡ್ಡಿ, ಕೇಂದ್ರ ಸಚಿವ ಕಿಶನ್ ರೆಡ್ಡಿ, ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್, ಟಿಡಿಪಿ ನಾಯಕ ನಾರಾ ಲೋಕೇಶ್, ಸಿಪಿಐ ನಾಯಕ ನಾರಾಯಣ ಸಂತಾಪ ಸೂಚಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!