ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ 5 ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಮಂಗಳವಾರ ಭಯೋತ್ಪಾಕದರು ಪಹಲ್ಗಾಮ್ನಲ್ಲಿ ಅಟ್ಟಹಾಸ ಮೆರೆದಿದ್ದರು. ಬರೋಬ್ಬರಿ 26 ಮಂದಿ ಜನರನ್ನು ಬಲಿ ಪಡೆದಿದ್ದರು. ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದ ಪ್ರಧಾನಿ ಮೋದಿಯವರು ದಾಳಿಗೆ ಮೊದಲ ಪ್ರತ್ಯುತ್ತರವಾಗಿ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾರೆ. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಮೋದಿ ನೇತೃತ್ವದ ಸಭೆಯಲ್ಲಿ ಕೈಗೊಂಡ 5 ಮಹತ್ವದ ನಿರ್ಧಾರ;
- ಪಾಕ್ ಜೊತೆಗಿನ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ ಸ್ಥಗಿತ
- ಪಾಕಿಸ್ತಾನದ ರಾಯಭಾರಿ ಕಚೇರಿ ಬಂದ್ಗೆ ಸೂಚನೆ
- ಭಾರತ- ಪಾಕ್ ನಡುವಿನ ಅಟ್ಟಾರಿ ಚೆಕ್ಪೋಸ್ಟ್ ಬಂದ್
- 2 ದಿನದ ಒಳಗೆ ಪಾಕಿಸ್ತಾನದ ಪ್ರಜೆಗಳು ತಮ್ಮ ದೇಶಕ್ಕೆ ಮರಳಬೇಕು
- ಪಾಕ್ ಪ್ರಜೆಗಳಿಗೆ ಭಾರತದ ವೀಸಾ ರದ್ದು
ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಿಸಿಎಸ್ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.