ಪಾಕ್ ವಿರುದ್ಧ ಮೋದಿ ರಾಜತಾಂತ್ರಿಕ ಸಮರ! ಭದ್ರತಾ ಸಂಪುಟ ಸಭೆಯಲ್ಲಿ 5 ಮಹತ್ವದ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಹಲ್ಗಾಮ್​ನಲ್ಲಿ ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ 5 ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಮಂಗಳವಾರ ಭಯೋತ್ಪಾಕದರು ಪಹಲ್ಗಾಮ್​ನಲ್ಲಿ ಅಟ್ಟಹಾಸ ಮೆರೆದಿದ್ದರು. ಬರೋಬ್ಬರಿ 26 ಮಂದಿ ಜನರನ್ನು ಬಲಿ ಪಡೆದಿದ್ದರು. ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದ ಪ್ರಧಾನಿ ಮೋದಿಯವರು ದಾಳಿಗೆ ಮೊದಲ ಪ್ರತ್ಯುತ್ತರವಾಗಿ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾರೆ. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಮೋದಿ ನೇತೃತ್ವದ ಸಭೆಯಲ್ಲಿ ಕೈಗೊಂಡ 5 ಮಹತ್ವದ ನಿರ್ಧಾರ;

  • ಪಾಕ್ ಜೊತೆಗಿನ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ ಸ್ಥಗಿತ
  • ಪಾಕಿಸ್ತಾನದ ರಾಯಭಾರಿ ಕಚೇರಿ ಬಂದ್​ಗೆ ಸೂಚನೆ
  • ಭಾರತ- ಪಾಕ್ ನಡುವಿನ ಅಟ್ಟಾರಿ ಚೆಕ್‌ಪೋಸ್ಟ್ ಬಂದ್​
  • 2 ದಿನದ ಒಳಗೆ ಪಾಕಿಸ್ತಾನದ ಪ್ರಜೆಗಳು ತಮ್ಮ ದೇಶಕ್ಕೆ ಮರಳಬೇಕು
  • ಪಾಕ್​​ ಪ್ರಜೆಗಳಿಗೆ ಭಾರತದ ವೀಸಾ ರದ್ದು

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಿಸಿಎಸ್ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!