ಹೊಸದಿಗಂತ ಡಿಜಿಟಲ್ ಡೆಸ್ಕ್
ಭಾರತದ ಅನುಭವಿ ವೇಗಿ ಮೊಹಮ್ಮದ್ ಶಮಿ ಕೈ ಗಾಯದಿಂದಾಗಿ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ಶನಿವಾರ ವರದಿ ಮಾಡಿದೆ.
ಮೂರು ಪಂದ್ಯಗಳ ಏಕದಿನ ಸರಣಿ ಭಾನುವಾರ ಮೀರ್ಪುರದ ಶೇರ್-ಎ-ಬಾಂಗ್ಲಾ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಶಮಿ ಏಕದಿನ ಮತ್ತು ಟೆಸ್ಟ್ ಎರಡೂ ತಂಡಗಳ ಭಾಗವಾಗಿದ್ದರು. ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಬೌಲಿಂಗ್ ದಾಳಿಯ ನೇತೃತ್ವ ವಹಿಸಿದ್ದರು.
ಟಿ 20 ವಿಶ್ವಕಪ್ ಸೋಲಿನ ಬಳಿಕ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅವರಂತಹ ಹಿರಿಯ ಆಟಗಾರರ ಜೊತೆಗೆ ನ್ಯೂಜಿಲೆಂಡ್ ವಿರುದ್ಧದ0 ಸೀಮಿತ ಓವರ್ಗಳ ಪ್ರವಾಸದಿಂದ ಶಮಿಗೆ ವಿರಾಮ ನೀಡಲಾಗಿತ್ತು. ವಿರಾಮದಲ್ಲಿದ್ದಾಗಲೇ ಶಮಿ ಗಾಯಗೊಂಡಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ