ಹೊಸದಿಗಂತ ವರದಿ,ಚಿತ್ರದುರ್ಗ
ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಸರಸಂಘಚಾಲಕರಾದ ಮೋಹನ್ ಭಾಗವತ್ ಅವರು ಸೋಮವಾರ ಸಂಜೆ ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಆಗಮಿಸಿದರು. ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಗೌರವಪೂರ್ವಕವಾಗಿ ಸ್ವಾಗತ ಕೋರುವ ಮೂಲಕ ಮೋಹನ್ ಭಾಗವತ್ ಅವರನ್ನು ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್, ರಾಜ್ಯ ಸರ್ಕಾರದ ಸಚಿವರಾದ ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ಬಿ.ಸಿ.ಪಾಟೀಲ್, ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಲಿಡ್ಕರ್ ಅಧ್ಯಕ್ಷ ಪ್ರೊ.ಲಿಂಗಣ್ಣ, ಕನಕಗಿರಿ ಶಾಸಕ ಬಸವರಾಜ್ ದಡೇಸಗೂರು, ಸಂಸದ ರಮೇಶ್ ಜಿಣಜಿಣಗಿ, ಆರ್ಎಸ್ಎಸ್ ನಾ.ತಿಪ್ಪೇಸ್ವಾಮಿ, ಸುಧೀರ್, ವಾದಿರಾಜ್ ಮತ್ತಿತರರು ಹಾಜರಿದ್ದರು.
ರಾತ್ರಿ ಮಾದಾರ ಗುರುಪೀಠದಲ್ಲಿ ತಂಗಲಿದ್ದಾರೆ. ಮಂಗಳವಾರ ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧೨.೩೦ ಗಂಟೆವರೆಗೆ ದಲಿತ, ಹಿಂದುಳಿದ ವರ್ಗಗಳ ಆಹ್ವಾನಿತ ಮಠಾಧೀಶರು, ಮೋಹನ್ ಭಾಗವತ್ ಅವರೊಂದಿಗೆ ಸಂವಾದ ನಡೆಸಲಿದ್ದಾರೆ. ಸಂವಾದ ಕಾರ್ಯಕ್ರಮದ ನಂತರ ಮಧ್ಯಾಹ್ನ ೩ ಗಂಟೆಗೆ ಬೆಂಗಳೂರಿಗೆ ತೆರಳಿದ್ದಾರೆ.