ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದಿಂದ ಕೆಎಸ್ ಆರ್ ಟಿ ನೂತನ ಉಪಾಧ್ಯಕ್ಷರನ್ನಾಗಿ ಮೋಹನ ಮೆಣಸಿನಕಾಯಿ ಅವರನ್ನು ನೇಮಕ ಮಾಡಿ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕಚೇರಿಯಲ್ಲಿ ಕೆ ಎಸ್ ಆರ್ ಟಿ ಸಿ ಉಪಾಧ್ಯಕ್ಷರಾಗಿ ಮೋಹನ ಮೆಣಸಿನಕಾಯಿ ಅವರು ಅಧಿಕಾರ ವಹಿಸಿಕೊಂಡರು.
ಈ ಸಂದರ್ಭ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ವಿ ಅನ್ಬುಕುಮಾರ್ ಭಾಆಸೇ ಅವರು ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಂತ ಮೋಹನ ಮೆಣಸಿನಕಾಯಿ ಅವರಿಗೆ ಹೂಗುಚ್ಚ ನೀಡಿ ಶುಭ ಕೋರಿದರು.