ಅಕ್ರಮ ಹಣ ವರ್ಗಾವಣೆ ಆರೋಪ: ಕೆಜಿಎಫ್ ಬಾಬುಗೆ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಅಕ್ರಮವಾಗಿ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿಎಫ್ ಬಾಬುಗೆ (KGF Babu) ಇಡಿ ಸಮನ್ಸ್ ನೀಡಿದೆ.
ನಾಳೆ 11ಗಂಟೆಗೆ ದೆಹಲಿಯ ಇಡಿ(ED) ಕಚೇರಿಗೆ ವಿಚಾರಣೆಗಾಗಿ ಬರುವಂತೆ ಸಮನ್ಸ್ ನೀಡಲಾಗಿದೆ.

ಕಳೆದ ಮೇ ತಿಂಗಳಲ್ಲಿ ಬೆಂಗಳೂರಿನ ವಸಂತ ನಗರದಲ್ಲಿರುವ ಕೆಜಿಎಫ್​ ಬಾಬು ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಬಾಬು ಒಡೆತನದ ಬಂಗಲೆ, ಕಚೇರಿ ಸೇರಿ 7 ಕಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದರು.

ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳಿಗೆ ಕೆಲ ಸಾಕ್ಷ್ಯಗಳು ಲಭ್ಯವಾದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಬಾಬು ಒಡೆತನದ ವಸಂತನಗರದಲ್ಲಿರುವ ರುಕ್ಸಾನಾ ಪ್ಯಾಲೇಸ್ ನಿವಾಸ, ಉಮ್ರಾ ಡೆವಲರ್ಸ್, ಉಮ್ರಾ ರಿಯಲ್ ಎಸ್ಟೇಟ್ ಕಂಪನಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಜಾಲಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!