ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಮಾಜಿ ಸಚಿವ ನವಾಬ್ ಮಲಿಕ್‌ ಗೆ ಜಾಮೀನು ನಿರಾಕರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದಾವೂದ್ ಇಬ್ರಾಹಿಂ ಮತ್ತು ಆತನ ಸಹಾಯಕರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್‌ ಗೆ ಮುಂಬೈನ ವಿಶೇಷ ನ್ಯಾಯಾಲಯ ಇಂದು ಜಾಮೀನು ನಿರಾಕರಿಸಿದೆ.
ವಿಶೇಷ ನ್ಯಾಯಾಧೀಶ ಆರ್ ಎನ್ ರೋಕಡೆ ಅವರು ಮಲಿಕ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.
ಜಾರಿ ನಿರ್ದೇಶನಾಲಯವು ಫೆಬ್ರವರಿಯಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಹಾಗೂ ಮಾಜಿ ಸಚಿವ ನವಾಬ್ ಮಲಿಕ್​ ಅವರನ್ನು ಬಂಧಿಸಿತ್ತು.
ಮಲಿಕ್ ವಿರುದ್ಧ EDಯ ಪ್ರಕರಣವು 1993ರ ಮುಂಬೈ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಮತ್ತು ಅವನ ಸಹಾಯಕರ ವಿರುದ್ಧ ಭಾರತದ ಕಠಿಣ ಭಯೋತ್ಪಾದನಾ ವಿರೋಧಿ ಕಾನೂನು UAPA ಅಡಿಯಲ್ಲಿ NIA ದಾಖಲಿಸಿದ ಎಫ್‌ಐಆರ್​​ನ್ನು ಸಾಕ್ಷಿಯಾಗಿಸಿದೆ. ನ್ಯಾಯಾಲಯವು ನವೆಂಬರ್ 14 ರಂದು ಮಲಿಕ್ ಅವರ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!