ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಫೋನ್ ಕದ್ದಾಲಿಕೆ ಮತ್ತು ಸ್ಟಾಕ್ ಎಕ್ಸ್ಚೇಂಜ್ನ ಉದ್ಯೋಗಿಗಳ ಗೂಢಚರ್ಯೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಮಾಜಿ ಎನ್ಎಸ್ಇ ಉನ್ನತ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣ ಅವರನ್ನು ಬಂಧಿಸಿದೆ.
ಈ ಹಿಂದೆ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಸಂಜಯ್ ಪಾಂಡೆ, ರಾಮಕೃಷ್ಣ ಮತ್ತು ರವಿ ನಾರಾಯಣ್ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಕ್ರಿಮಿನಲ್ ಸೆಕ್ಷನ್ಗಳ ಅಡಿಯಲ್ಲಿ ಇಡಿ ಪ್ರಕರಣ ದಾಖಲಿಸಿತ್ತು.
ನರೇನ್ ಮತ್ತು ರಾಮಕೃಷ್ಣ ಅವರು ಈಗ ನಿವೃತ್ತ ಮುಂಬೈ ಪೊಲೀಸ್ ಆಯುಕ್ತ ಪಾಂಡೆ ಅವರು ಸ್ಥಾಪಿಸಿದ ಕಂಪನಿಯೊಂದರಲ್ಲಿ ಸ್ಟಾಕ್ ಮಾರ್ಕೆಟ್ ಉದ್ಯೋಗಿಗಳ ಫೋನ್ ಕರೆಗಳನ್ನು ಕಾನೂನುಬಾಹಿರವಾಗಿ ಅಡ್ಡಗಟ್ಟುವ ಮೂಲಕ ಅವರ ಮೇಲೆ ಗೂಢಚರ್ಯೆ ನಡೆಸಲು ಸಂಚು ರೂಪಿಸಿದ್ದರು ಎಂದು ಸಿಬಿಐ ಆರೋಪಿಸಿತ್ತು.