ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಹುಂಡಿಗೆ ಲಕ್ಷಾಂತರ ಹಣ ಹರಿದುಬಂದಿದೆ.
ಮೇನಲ್ಲಿ ಸಾಕಷ್ಟು ಭಕ್ತರು ರಾಯರ ಸನ್ನಿಧಿಗೆ ಭೇಟಿ ನೀಡಿದ್ದು, 34 ದಿನದಲ್ಲಿಯೇ ಮೂರು ಕೋಟಿ 53 ಲಕ್ಷ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.
ಇಷ್ಟೊಂದು ಮೊತ್ತದ ಕಾಣಿಕೆ ಸಂಗ್ರಹವಾಗಿರುವುದು ಇದೇ ಮೊದಲು ಎನ್ನಲಾಗಿದೆ. ಭಕ್ತರು, ದಾನಿಗಳು ಈ ಬಾರಿ ಹುಂಡಿಗೆ ಸಾಕಷ್ಟು ಕಾಣಿಕೆ ಹಾಕಿದ್ದು, ಶ್ರೀಮಠದ ಸಿಬ್ಬಂದಿ ಹಾಗೂ ಸೇವಕರು ಹುಂಡಿಯ ಹಣ ಎಣಿಕೆ ಕಾರ್ಯ ನೆರವೇರಿಸಿದ್ದಾರೆ. ಇಷ್ಟೇ ಅಲ್ಲದೆ 197 ಗ್ರಾಂ ಚಿನ್ನ ಹಾಗೂ 1 ಕೆ.ಜಿ 187 ಗ್ರಾಂ ಬೆಳ್ಳಿಯನ್ನು ಭಕ್ತರು ಹುಂಡಿಯಲ್ಲಿ ಹಾಕಿದ್ದಾರೆ.