ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಲಾಗಿರುವ ತಮಿಳುನಾಡಿನ ಸಚಿವ ವಿ. ಸೆಂಥಿಲ್ ಬಾಲಾಜಿ ಅವರ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಅವರನ್ನು ಸೆಷನ್ಸ್ ಕೋರ್ಟ್ಗೆ ಶನಿವಾರ ಹಾಜರುಪಡಿಸಿತು.
ಬಾಲಾಜಿ ಅವರಿಗೆ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಎಸ್. ಅಲ್ಲಿ ಅವರು ಆ. 25ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ಸೆಂಥಿಲ್ ಬಾಲಾಜಿ ಅವರನ್ನು ಐದು ದಿನಗಳ ಕಾಲ ಇ.ಡಿ ಕಸ್ಟಡಿಗೆ ತೆಗೆದುಕೊಳ್ಳಲು ನ್ಯಾಯಾಧೀಶರು ಆಗಸ್ಟ್ 7ರಂದು ಅನುಮತಿಸಿದ್ದರು.