ಅಕ್ರಮ ಹಣ ವರ್ಗಾವಣೆ ಪ್ರಕರಣ: ಲಾಲು ಪ್ರಸಾದ್​ , ತೇಜಸ್ವಿ ಯಾದವ್ ಗೆ ಸಮನ್ಸ್​ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಜೆಡಿ ವರಿಷ್ಠ ಲಾಲು ಪ್ರಸಾದ್​ ಯಾದವ್, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್​ಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್​ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತನಿಖಾಧಿಕಾರಿಗಳ ಮುಂದೆ ತಮ್ಮ ಹೇಳಿಕೆ ದಾಖಲಿಸಲು ಡಿಸೆಂಬರ್​ 22ರಂದು ತೇಜಸ್ವಿ ಯಾದವ್ ಹಾಗೂ ಡಿಸೆಂಬರ್​ 27ರಂದು ಲಾಲು ಪ್ರಸಾದ್​ ಯಾದವ್ ವಿಚಾರಣೆಗೆ ಹಾಜರಾಗುವಂತೆ​ ಸೂಚಿಸಲಾಗಿದೆ.

ಲಾಲು ಪ್ರಸಾದ್​ ಯಾದವ್​ ಅವರು ಯುಪಿಎ ಸರ್ಕಾರದ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದ ವೇಳೆ ಹಗರಣ ನಡೆದಿದ್ದು, 2004 ರಿಂದ 2009ರ ಅವಧಿಯಲ್ಲಿ ರೈಲ್ವೆ ಇಲಾಖೆಯ ಡಿ ಗ್ರೂಪ್​ ಹುದ್ದೆಗಳಿಗೆ ಹಲವಾರು ಜನರನ್ನು ನೇಮಿಸಲಾಯಿತು. ನೇಮಕಗೊಂಡವರು ಬದಲಿಯಾಗಿ ತಮ್ಮ ಜಮೀನನ್ನು ಆಗಿನ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್​ ಯಾದವ್​ ಅವರಿಗೆ ಸಂಬಂಧಿಸಿದ ಇನ್ಫೋಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್​ಗೆ ವರ್ಗಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!