‘ಮಳೆ’ನಾಡಾದ ಕರಾವಳಿ, ಮಲೆನಾಡು: ಇನ್ನಷ್ಟು ಪ್ರಬಲವಾಗಲಿದೆ ಮುಂಗಾರು??

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಕರಾವಳಿ ಹಾಗೂ ಮಲೆನಾಡಿನ ಭಾಗಳಲ್ಲಿ ಮುಂಗಾರು ಮತ್ತಷ್ಟು ಚುರುಕು ಪಡೆದುಕೊಂಡಿದೆ.
ರಾಜ್ಯದ ಕರಾವಳಿಯ ಹಲವೆಡೆ ಭಾರೀ‌ ಮಳೆಯಾಗುತ್ತಿದ್ದು, ಇದೇ ವಾತಾವರಣ ಮುಂದಿನ ಒಂದು ವಾರ ಮುಂದುವರಿಯಲಿದೆ.
ಒಳನಾಡು ಭಾಗದಲ್ಲಿ ಇನ್ನಷ್ಟೇ ಮಳೆ ಚುರುಕುಗೊಳ್ಳಬೇಕಿದೆ.

ಹೇಗಿದೆ ಮುನ್ಸೂಚನೆ?
ಜು.1ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕಾಸರಗೋಡು, ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಗದಗ, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಕೂಡಾ ಉತ್ತಮ ಮಳೆಯ ಮುನ್ಸೂಚನೆ ಇದೆ.

ದಾವಣಗೆರೆ, ಧಾರವಾಡ, ಬೆಳಗಾವಿ, ಹಾವೇರಿಗಳಲ್ಲಿ‌ ಸಾಮಾನ್ಯ ಮಳೆ, ರಾಜ್ಯದ ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!