ದುರ್ಬಲಗೊಂಡ ಮುಂಗಾರು: ರಾಜ್ಯದ ಹಲವೆಡೆ ಸಾಧಾರಣ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹವಾಮಾನ ಮುನ್ಸೂನೆಯಂತೆ ನಾಳೆಯಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಒಂದಿಷ್ಟು ತೀವ್ರತೆ ಪಡೆದುಕೊಳ್ಳಲಿದೆ. ಕರಾವಳಿ ಭಾಗದಲ್ಲಿ ಮುಂಗಾರು ದುರ್ಬಲ ಸ್ಥಿತಿಯಲ್ಲಿಯೇ ಮುಂದುವರಿಯಲಿದ್ದು, ದಿನದಲ್ಲಿ ಒಂದೆರಡು ಮಳೆಗಷ್ಟೇ ಸೀಮಿತವಾಗಲಿದೆ.

ಜೂ. 14ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನದ ಬಳಿಕ‌ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ಮೋಡ, ಒಂದೆರಡು ಕಡೆ ಮಳೆಯಾಗಲಿದೆ. ಕೊಡಗು, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗದ‌ ದಕ್ಷಿಣ ಭಾಗ, ಪಾವಗಢ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಚಾಮರಾಜನಗರದ‌ಒಂದೆರಡು ಕಡೆ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲಾ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!